ಆಹಾರ ಭದ್ರತೆ ಮತ್ತು ರಾಷ್ಟ್ರದಾದ್ಯಂತ ಮನೆಗಳಿಗೆ ಅಗತ್ಯ ವಸ್ತುಗಳ ಸಮಾನ ವಿತರಣೆಯನ್ನು ಖಾತ್ರಿಪಡಿಸುವಲ್ಲಿ ಪಡಿತರ ಚೀಟಿಗಳು ಪ್ರಮುಖ ಸಾಧನವಾಗಿದೆ. ಅವರು ಬಡತನ ರೇಖೆಯ ಮೇಲೆ (ಎಪಿಎಲ್) ಮತ್ತು ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರ ಚೀಟಿಗಳನ್ನು ಒಳಗೊಂಡಂತೆ ವಿವಿಧ ವರ್ಗಗಳಲ್ಲಿ ಬರುತ್ತಾರೆ. ಈ ಕಾರ್ಡ್ಗಳು ಸಬ್ಸಿಡಿ ಸಹಿತ ಆಹಾರ ಪದಾರ್ಥಗಳಿಗೆ ಪ್ರವೇಶವನ್ನು ಒದಗಿಸುವಲ್ಲಿ ನಿರ್ಣಾಯಕವಾಗಿವೆ ಮತ್ತು ಅವುಗಳನ್ನು ಸಮಾಜ ಕಲ್ಯಾಣ ಕಾರ್ಯಕ್ರಮಗಳ ಅತ್ಯಗತ್ಯ ಭಾಗವಾಗಿ ಮಾಡುತ್ತವೆ. ಈ ಕಾರ್ಯಕ್ರಮಗಳ ನಿಖರತೆ ಮತ್ತು ನ್ಯಾಯಸಮ್ಮತತೆಯನ್ನು ಕಾಪಾಡಿಕೊಳ್ಳಲು, ಸರ್ಕಾರವು ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿಗಳ ತಿದ್ದುಪಡಿಯ ಅವಧಿಯನ್ನು ವಿಸ್ತರಿಸಿದೆ.
![Extension of period for correction of APL and BPL ration card](https://malnadsiri.com/wp-content/uploads/2023/10/Extension-of-period-for-correction-of-APL-and-BPL-ration-card-1024x576.jpg)
ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಸಿಹಿಸುದ್ದಿನೀಡಿದ್ದು, ಬಿಪಿಎಲ್, ಎಪಿಎಲ್ ಸೇರಿ ಪಡಿತರ ಚೀಟಿಯಲ್ಲಿನ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮತ್ತೊಮ್ಮೆ ಪಡಿತರ ಚೀಟಿದಾರರಿಗೆ ಹೆಸರು ಸೇರ್ಪಡೆ/ತಿದ್ದುಪಡಿಗೆ ಅಕ್ಟೋಬರ್ 16 ರಿಮದ 21 ರವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಿದೆ.
ಅ.16 ರಿಂದ 18 ರವರೆಗೆ ಈ ಜಿಲ್ಲೆಗಳಲ್ಲಿ ತಿದ್ದುಪಡಿಗೆ ಅವಕಾಶ
ಬಾಗಲಕೋಟೆ, ಬೆಳಗಾವಿ, ಚಾಮರಾಜಪೇಟೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ
ಅ. 19 ರಿಂದ 21 ರವರೆಗೆ ಈ ಜಿಲ್ಲೆಗಳಲ್ಲಿ ತಿದ್ದುಪಡಿಗೆ ಅವಕಾಶ
ಬಳ್ಳಾರಿ, ಬಿದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ , ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ
ಈ ಹಿಂದೆ ಆಹಾರ ಇಲಾಖೆ ಅ.5 ರಿಂದ 13ರವರೆಗೆ ತಿದ್ದುಪಡಿ ಮಾಡಿಕೊಳ್ಳಲು ಕಾಲಾವಕಾಶ ನೀಡಿತ್ತು. ಸರ್ವರ್ ಸಮಸ್ಯೆ ಹಿನ್ನೆಲೆಯಲ್ಲಿ ಇದೀಗ ಮತ್ತೊಮ್ಮೆ ತಿದ್ದುಪಡಿಗೆ ಅವಕಾಶ ನೀಡಿದೆ.